Government ತುರ್ತು ಬೆಳವಣಿಗೆ: ಪಾಕಿಸ್ತಾನಿ ಪ್ರಜೆಗಳಿಗೆ 48 ಗಂಟೆಗಳೊಳಗೆ ಭಾರತ ತೊರೆಯಲು ಕೇಂದ್ರ ಸರ್ಕಾರದ ಆದೇಶ
Government: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಪಾಕಿಸ್ತಾನಿ ಪ್ರಜೆಗಳು 48 ಗಂಟೆಗಳೊಳಗೆ ಭಾರತವನ್ನು ತೊರೆಯಬೇಕು ಎಂಬುದಾಗಿ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಇದಕ್ಕುಗೂ ಮುಂದಾಗಿ ತೆಗೆದುಕೊಳ್ಳಲಾದ ಪ್ರಮುಖ ಕ್ರಮಗಳು ಹೀಗಿವೆ:
ಪ್ರಮುಖ ನಿರ್ಧಾರಗಳು:
- ಪಾಕಿಸ್ತಾನಿ ರಾಯಭಾರಿಯನ್ನು ಗಡಿಪಾರು ಮಾಡಲಾಗುತ್ತದೆ.
- ಪಾಕಿಸ್ತಾನಿ ಪ್ರಜೆಗಳಿಗೆ ನೂತನ ವೀಸಾ ನೀಡುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.
- ಅಟ್ಟಾರಿ-ವಾಘಾ ಗಡಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲಾಗಿದೆ.
- ಭಾರತೀಯ ರಾಯಭಾರಿಯನ್ನು ಪಾಕಿಸ್ತಾನದಿಂದ ಹಿಂದಕ್ಕೆ ಕರೆಸಿಕೊಳ್ಳಲಾಗುತ್ತದೆ.
- 1960ರ ಸಿಂಧೂ ಜಲ ಒಪ್ಪಂದವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
- ಸಾರ್ಕ್ ವೀಸಾ ವಿನಾಯಿತಿ ಯೋಜನೆಯಡಿ (SVES) ಈಗ ಪಾಕಿಸ್ತಾನಿ ಪ್ರಜೆಗಳು ಭಾರತ ಪ್ರವೇಶಿಸಲು ಅನುಮತಿ ಇರುವುದಿಲ್ಲ.
- ಈಗಾಗಲೇ ಈ ಯೋಜನೆಯಡಿ ಭಾರತದಲ್ಲಿ ಇರುವವರು 48 ಗಂಟೆಗಳೊಳಗೆ ದೇಶ ತೊರೆಯಬೇಕು.
- ಪಾಕಿಸ್ತಾನಿ ಹೈಕಮಿಷನ್ನಲ್ಲಿರುವ ರಕ್ಷಣಾ, ನೌಕಾ, ವಾಯು ಸಲಹೆಗಾರರಿಗೆ ‘ಪರ್ಸನಾ ನಾನ್ ಗ್ರಾಟಾ’ ಘೋಷಣೆ ಮಾಡಲಾಗಿದೆ. ಅವರಿಗೆ ಭಾರತ ಬಿಡಲು ಒಂದು ವಾರದ ಕಾಲಾವಕಾಶ ನೀಡಲಾಗಿದೆ.
- ಭಾರತದ ಹೈಕಮಿಷನ್ನಲ್ಲಿರುವ ತಮ್ಮದೇ ರಕ್ಷಣಾ ಅಧಿಕಾರಿಗಳನ್ನು ಭಾರತ ಸರ್ಕಾರ ಹಿಂದಕ್ಕೆ ಕರೆಸಿಕೊಳ್ಳಲಿದೆ. ಈ ಹುದ್ದೆಗಳನ್ನು ರದ್ದುಗೊಳಿಸಲಾಗಿದೆ ಎಂದು ಪರಿಗಣಿಸಲಾಗುತ್ತದೆ.
ಭಯೋತ್ಪಾದಕ ದಾಳಿಯ ಗಂಭೀರತೆಯನ್ನು ಗಮನಿಸಿ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ.

