Thursday, April 10, 2025
spot_img
HomeSchemesLoan: ಬಡ್ಡಿ ಇಲ್ಲದೆ 5 ಲಕ್ಷ ಸಾಲ ವಿತರಣೆ.!

Loan: ಬಡ್ಡಿ ಇಲ್ಲದೆ 5 ಲಕ್ಷ ಸಾಲ ವಿತರಣೆ.!

Loan: ಬಡ್ಡಿ ಇಲ್ಲದೆ 5 ಲಕ್ಷ ಸಾಲ ವಿತರಣೆ.!

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಸರ್ಕಾರದ ವತಿಯಿಂದ 5 ಲಕ್ಷ ರೂಪಾಯಿ ಸಾಲವನ್ನು(Loan) ನೀಡುತ್ತಿದ್ದಾರೆ ಈ ವಿಚಾರವನ್ನು ಮಾನ್ಯ ಮುಖ್ಯಮಂತ್ರಿಗಳಾದಂತಹ ಸಿದ್ದರಾಮಯ್ಯ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇನ್ನು ಸಾಲವನ್ನು ಪಡೆಯಲು ಬೇಕಾಗುವ ದಾಖಲಾತಿಗಳು ಏನು.? ಅರ್ಜಿಯನ್ನು ಸಲ್ಲಿಸುವ ವಿಧಾನ ಹೇಗೆ.? ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಿ ಕೊಡುತ್ತೇವೆ ಕೊನೆಯವರೆಗೂ ಓದಿ.

ಹವಾಮಾನ ವೈಪರೀತ್ಯ, ಅನಿಶ್ಚಿತ ಫಸಲು ಹಾಗೂ ರೋಗರುಜಿನಗಳಿಂದ ತತ್ತರಿಸಿಹೋಗಿರುವ ಕೃಷಿ ಕ್ಷೇತ್ರದಲ್ಲಿ ಮತ್ತೆ ಉತ್ಸಾಹವನ್ನು ಕಾಣಲು ನಮ್ಮ ಸರ್ಕಾರ ಟೊಂಕ ಕಟ್ಟಿ ನಿಂತಿದೆ. ಅನ್ನದಾತರ ಕೈಗಳಿಗೆ ಹಣ ನೀಡಿ ಅದನ್ನು ಕೃಷಿಯಲ್ಲಿ ಹೂಡಿಕೆ ಮಾಡಲು ಪ್ರೋತ್ಸಾಹಿಸಿ, ಆ ಮೂಲಕ ನಾಡಿನ ಆರ್ಥಿಕತೆಗೆ ಬಲತುಂಬುವುದು ನಮ್ಮ ಸರ್ಕಾರದ ಆಶಯ. 5 ಲಕ್ಷ ರೂ.ಗಳವರೆಗೆ ಶೂನ್ಯ ಬಡ್ಡಿ ರೂಪದಲ್ಲಿ ನೀಡಲಾಗುವ ಸಾಲವನ್ನು ಸಹಕಾರಿ ಕೃಷಿ ಬ್ಯಾಂಕ್ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗಳಿಗೆ ವಿಸ್ತರಿಸಲಾಗಿದೆ. ಇದಕ್ಕಾಗಿ ಹೆಚ್ಚುವರಿಯಾಗಿ 38 ಕೋಟಿ ರೂ. ಮೀಸಲಿರಿಸಲಾಗಿದೆ. ರೈತರ ಕಾಳಜಿ ಎನ್ನುವುದು ನಮ್ಮ ಭಾಷಣದ ಸರಕಲ್ಲ, ಆಡಳಿತದ ಕೇಂದ್ರಬಿಂದು ಎಂಬುದನ್ನು ಮತ್ತೆ ಸಾಬೀತು ಮಾಡಿದ್ದೇವೆ. ಎಂದು ಸಿದ್ದರಾಮಯ್ಯನವರು ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ.

WhatsApp Group Join Now
Telegram Group Join Now

ಶೂನ್ಯ ಬಡ್ಡಿ ದರದಲ್ಲಿ ನೀಡುವ ಕೃಷಿ ಸಾಲ ಮಿತಿಯನ್ನು 3 ಲಕ್ಷ ರೂ.ದಿಂದ 5 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ. 2023-24ನೇ ಸಾಲಿನಲ್ಲಿ 6,744 ರೈತರಿಗೆ 290 ಕೋಟಿ ರೂ. ಸಾಲ ನೀಡಲಾಗಿದ್ದು, 2025ರ ಫೆಬ್ರವರಿ ಅಂತ್ಯದ ವೇಳೆಗೆ 13,689 ರೈತರಿಗೆ 589.12 ಕೋಟಿ ರೂ. ಕೃಷಿ ಸಾಲ ವಿತರಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

ಸಾಲ ಪಡೆಯಲು ಅರ್ಹತೆ:

ವಿಧಾನಪರಿಷತ್ ಪ್ರಶೋತ್ತರ ಕಲಾಪದಲ್ಲಿ ಪ್ರತಾಪ ಸಿಂಹ ನಾಯಕ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 5 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ಪಡೆಯಲು ಎಲ್ಲ ರೈತರು ಅರ್ಹರಲ್ಲ ಎಂದು ಸ್ಪಷ್ಟಪಡಿಸಿದರು. ಭೂಸ್ವಾಮ್ಯ ಹೆಚ್ಚು ಇದ್ದರೆ ಹೆಚ್ಚಿನ ಸಾಲ ಸಿಗಲಿದೆ, ಕಡಿಮೆ ಭೂಸ್ವಾಮ್ಯ ಹೊಂದಿದ್ದರೆ ಅನುಗುಣವಾಗಿ ಸಾಲದ ಪ್ರಮಾಣ ಕಡಿಮೆಯಾಗಲಿದೆ ಎಂದು ವಿವರಿಸಿದರು.

ನಬಾರ್ಡ್ ನೆರವು ಮತ್ತು ಸಾಲ ವಿತರಣೆಯ ವಿವರ:

ಈ ಬಾರಿ ನಬಾರ್ಡ್ ನಿರೀಕ್ಷಿತ ಮಟ್ಟದಲ್ಲಿ ನೆರವು ನೀಡದ ಕಾರಣ, 5600 ಕೋಟಿ ರೂ. ಸಹಾಯಧನ ಸಿಗಬೇಕಾಗಿದ್ದರೂ ಶೇ.58ರಷ್ಟು ಕಡಿಮೆಯಾಗಿ 936 ಕೋಟಿ ರೂ. ಮಾತ್ರ ಲಭಿಸಿದೆ. ಲಭ್ಯ ಸಂಪತ್ತನ್ನು ಪರಿಗಣಿಸಿ ಕೃಷಿ ಸಾಲ ವಿತರಣೆಯ ಕ್ರಮ ಕೈಗೊಳ್ಳಲಾಗುತ್ತಿದೆ. ಸಹಕಾರಿ ಬ್ಯಾಂಕುಗಳು ಶೂನ್ಯ ಬಡ್ಡಿ ದರದಲ್ಲಿ ನೀಡುವ ಸಾಲಕ್ಕೆ ಸರಕಾರವೇ ಬಡ್ಡಿ ಪಾವತಿಸಲಿದೆ.

ಶೂನ್ಯ ಬಡ್ಡಿ ಸಾಲದ ಪರಿಚಯ:

ರಾಜ್ಯದಲ್ಲಿ 2004ರಲ್ಲಿ ಕೃಷಿ ಸಾಲ ಯೋಜನೆ ಆರಂಭಗೊಂಡಿದ್ದು, 2012-13ರಲ್ಲಿ 1 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿ ಸಾಲ ನೀಡಲಾಗುತ್ತಿತ್ತು. 2013-14ರಲ್ಲಿ ಈ ಮಿತಿಯನ್ನು 2 ಲಕ್ಷ ರೂ.ಗೆ ವಿಸ್ತರಿಸಲಾಯಿತು. 2014ರಲ್ಲಿ 5 ಲಕ್ಷ ರೂ.ಗೆ ಹೆಚ್ಚಿಸಲಾಯಿತು, ಆದರೆ ಅನುಷ್ಠಾನಗೊಳ್ಳುವ ಮುನ್ನ ಸರಕಾರ ಬದಲಾಗಿದೆ. ಪ್ರಸ್ತುತ ಸರಕಾರ 3ರಿಂದ 5 ಲಕ್ಷ ರೂ.ವರೆಗೆ ಸಾಲ ಮಿತಿಯನ್ನು ವಿಸ್ತರಿಸಿದೆ.

ಸಾಲ ವಿತರಣಾ ನಿಯಮಗಳು:

ರೈತರು ಪಡೆಯುವ ಕೃಷಿ ಸಾಲ ಭೂಸ್ವಾಮ್ಯ ಅಥವಾ ಬೆಳೆ ಆಧಾರದ ಮೇಲೆ ನಿರ್ಧಾರವಾಗುತ್ತದೆ.

  • ಅಲ್ಪಾವಧಿ ಸಾಲ: 1 ವರ್ಷದವರೆಗೆ ಶೂನ್ಯ ಬಡ್ಡಿ.
  • ಮಧ್ಯಮಾವಧಿ ಸಾಲ: 5 ವರ್ಷ.
  • ದೀರ್ಘಾವಧಿ ಸಾಲ: 10 ವರ್ಷ.

ಸಾಲ ನೀಡುವ ಬ್ಯಾಂಕುಗಳು:

ಕೃಷಿ ಚಟುವಟಿಕೆಗಳಿಗೆ ಶೂನ್ಯ ಬಡ್ಡಿ ಸಾಲವನ್ನು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳು, ಪಿಕಾರ್ಡ್ ಬ್ಯಾಂಕ್ ಮತ್ತು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳು (DCC Bank) ಒದಗಿಸುತ್ತವೆ. ಇದಲ್ಲದೆ, ಕುರಿ, ಮೇಕೆ, ಕೋಳಿ, ಹಂದಿ ಸಾಕಾಣಿಕೆ, ರೇಷ್ಮೆ ಶೆಡ್ ನಿರ್ಮಾಣಗಳಿಗೆ ಸಹ 5 ಲಕ್ಷ ರೂ.ವರೆಗೆ ಸಾಲ ಲಭ್ಯವಿದೆ.

ಅರ್ಹತೆ ಮತ್ತು ನೋಂದಣಿ ಪ್ರಕ್ರಿಯೆ:

  • ಬ್ಯಾಂಕ್ ಸದಸ್ಯತ್ವ: ರೈತರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಥವಾ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳ ಸದಸ್ಯರಾಗಿರಬೇಕು.
  • ಭೂಸ್ವಾಮ್ಯ: ಸಾಲ ಪಡೆಯುವ ರೈತರು ಜಮೀನು ಹೊಂದಿರುವ ಸ್ಥಳ ಅಥವಾ ವಾಸಿಸುವ ಪ್ರದೇಶದ ಸಹಕಾರ ಸಂಘ ವ್ಯಾಪ್ತಿಯಲ್ಲಿ ಇರಬೇಕು.
  • ಇತರ ಸಾಲಗಳು: ರೈತರು ಬೇರೆ ಬ್ಯಾಂಕುಗಳಿಂದ ಸಾಲ ಪಡೆದಿದ್ದರೆ ಶೂನ್ಯ ಬಡ್ಡಿ ಸಾಲಕ್ಕೆ ಅರ್ಹರಾಗುವುದಿಲ್ಲ.
  • ನಿರಪೇಕ್ಷಣಾ ಪತ್ರ: ನಿರ್ದಿಷ್ಟ ಸಂಘದಲ್ಲಿ ಸಾಲ ಸಿಗದಿದ್ದರೆ, ನಿರಪೇಕ್ಷಣಾ ಪತ್ರ ಪಡೆದು ಸಂಬಂಧಿತ ಡಿಸಿಸಿ ಬ್ಯಾಂಕಿನಲ್ಲಿ ಅರ್ಜಿ ಸಲ್ಲಿಸಬಹುದು.
  • ರಾಜ್ಯ ಮಿತಿಯ ನಿಯಮ: ನೆರೆರಾಜ್ಯದಲ್ಲಿ ವಾಸವಿದ್ದು, ಕರ್ನಾಟಕದಲ್ಲಿ ಜಮೀನು ಹೊಂದಿರುವ ರೈತರು ಈ ಯೋಜನೆಗೆ ಅರ್ಹರಾಗುವುದಿಲ್ಲ.

ಆವಶ್ಯಕ ದಾಖಲೆಗಳು:

  • ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಥವಾ DCC ಬ್ಯಾಂಕ್ ಸದಸ್ಯತ್ವ ಪಟ್ಟಿ
  • ಪಹಣಿ (RTC)
  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್ ಝೆರಾಕ್ಸ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ಈ ಎಲ್ಲಾ ನಿಯಮ ಮತ್ತು ಪ್ರಕ್ರಿಯೆಗಳನ್ನು ಪಾಲನೆ ಮಾಡುವ ಮೂಲಕ ರೈತರು ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ಪಡೆಯಲು ಸಾಧ್ಯವಾಗುತ್ತದೆ.

ಕರ್ನಾಟಕ ಸರ್ಕಾರವು 2023-24ನೇ ಸಾಲಿನ ಬಜೆಟ್‌ನಲ್ಲಿ ರೈತರಿಗೆ ಶೂನ್ಯ ಬಡ್ಡಿದರದ ಸಾಲದ ಮಿತಿಯನ್ನು 3 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗಳಿಗೆ ಹೆಚ್ಚಿಸಿದೆ. ಇದೇ ರೀತಿ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳ ಬಡ್ಡಿದರವನ್ನು ಶೇಕಡಾ 3ರಷ್ಟು ಇಳಿಸಿ, ಈ ಸಾಲಗಳ ಮಿತಿಯನ್ನು 10 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಈ ಕ್ರಮದಿಂದ ರಾಜ್ಯದ 35 ಲಕ್ಷಕ್ಕಿಂತ ಹೆಚ್ಚು ರೈತರು 25,000 ಕೋಟಿ ರೂ.ಗಳಷ್ಟು ಸಾಲ ಪಡೆಯಲು ಸಾಧ್ಯವಾಗಲಿದೆ.

ಸರ್ಕಾರವು ರೈತರಿಗೆ ಶೂನ್ಯ ಬಡ್ಡಿದರದ ಸಾಲ ನೀಡಲು ಬದ್ಧವಾಗಿದೆ. ಸಹಕಾರ ಸಂಘಗಳ ಮೂಲಕ ಈ ಸಾಲಗಳನ್ನು ವಿತರಿಸಲಾಗುತ್ತಿದ್ದು, ಪ್ರತಿ ರೈತನ ಜಮೀನು ಹಿಡುವಳಿ, ಬೆಳೆ ಪ್ರಕಾರ ಮತ್ತು ಸಾಲ ಮರುಪಾವತಿ ಸಾಮರ್ಥ್ಯವನ್ನು ಪರಿಗಣಿಸಿ ಸಾಲದ ಪ್ರಮಾಣವನ್ನು ನಿಗದಿಪಡಿಸಲಾಗುತ್ತದೆ. ಆದಾಗ್ಯೂ, ನಬಾರ್ಡ್‌ನಿಂದ ನಿರೀಕ್ಷಿತ ಪ್ರಮಾಣದಲ್ಲಿ ಸಾಲ ಸೌಲಭ್ಯ ಸಿಗದಿರುವುದರಿಂದ, ಸರ್ಕಾರವು ಪ್ರಧಾನಮಂತ್ರಿ, ಹಣಕಾಸು ಸಚಿವರು ಮತ್ತು ನಬಾರ್ಡ್ ಮುಖ್ಯಸ್ಥರಿಗೆ ಹೆಚ್ಚಿನ ಸಾಲ ನೀಡುವಂತೆ ಮನವಿ ಮಾಡಿದೆ.

ರೇಷ್ಮೆ ಕೃಷಿಯನ್ನು ಉತ್ತೇಜಿಸಲು, ರಾಮನಗರದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಿಸಲಾಗುತ್ತಿದೆ. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗುವಂತೆ ಶಿಡ್ಲಘಟ್ಟದಲ್ಲಿನ ರೇಷ್ಮೆಗೂಡು ಮಾರುಕಟ್ಟೆಯನ್ನು 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯವನ್ನು ಬಲಪಡಿಸಲಾಗುತ್ತಿದೆ, ಇದರಿಂದ ಉತ್ತಮ ಗುಣಮಟ್ಟದ ರೋಗರಹಿತ ಮೈಸೂರು ಬಿತ್ತನೆಗೂಡುಗಳನ್ನು ಉತ್ಪಾದಿಸಿ, ವಾಣಿಜ್ಯ ರೇಷ್ಮೆ ಬೆಳೆಗಾರರಿಗೆ ವಿತರಿಸಲು ಮತ್ತು ಉತ್ತಮ ಗುಣಮಟ್ಟದ ಮಿಶ್ರತಳಿ, ಕಚ್ಚಾ ರೇಷ್ಮೆಯನ್ನು ಉತ್ಪಾದಿಸಲು ಅನುಕೂಲವಾಗಲಿದೆ.

ಸರ್ಕಾರವು ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸಲು ‘ನವೋದ್ಯಮ’ ಎಂಬ ಹೊಸ ಯೋಜನೆಯಡಿ 10 ಕೋಟಿ ರೂ. ಒದಗಿಸಿದೆ. ರೈತರು ಬೆಳೆದ ಉತ್ಪನ್ನಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅನುಕೂಲವಾಗುವಂತೆ ‘ನಂದಿನಿ’ ಮಾದರಿಯಲ್ಲಿ ರೈತ ಉತ್ಪನ್ನಗಳಿಗೆ ಏಕೀಕೃತ ಬ್ರಾಂಡಿಂಗ್‌ ವ್ಯವಸ್ಥೆ ರೂಪಿಸಲು 10 ಕೋಟಿ ರೂ. ಮೀಸಲಿಡಲಾಗಿದೆ. ಹಿಂದುಳಿದ ತಾಲ್ಲೂಕುಗಳ 100 ರೈತ ಉತ್ಪಾದಕ ಸಂಸ್ಥೆಗಳಿಗೆ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ತಲಾ 20 ಲಕ್ಷ ರೂ. ವರೆಗಿನ ಸಾಲಕ್ಕೆ ಶೇಕಡಾ 4ರ ಬಡ್ಡಿ ಸಹಾಯಧನ ನೀಡಲಾಗುತ್ತಿದೆ.

ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಒದಗಿಸುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಬಲಪಡಿಸಿ, 300 ಹೈಟೆಕ್‌ ಹಾರ್ವೆಸ್ಟರ್‌ ಹಬ್‌ಗಳನ್ನು ಹಂತಹಂತವಾಗಿ ಸ್ಥಾಪಿಸಲು ಉದ್ದೇಶಿಸಲಾಗಿದೆ. 2023-24ನೇ ಸಾಲಿನಲ್ಲಿ 100 ಹಬ್‌ಗಳನ್ನು ಸ್ಥಾಪಿಸಲು 50 ಕೋಟಿ ರೂ. ಮೀಸಲಿಡಲಾಗಿದೆ. ತೋಟಗಾರಿಕಾ ವಲಯದಲ್ಲಿ ತೆಂಗು, ಅಡಿಕೆ, ದ್ರಾಕ್ಷಿ, ದಾಳಿಂಬೆ, ಮಾವು ಮತ್ತಿತರ ಹಣ್ಣು, ತರಕಾರಿ, ಹೂವುಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರಫ್ತಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. 2023-24ನೇ ಸಾಲಿನಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗೆ ಎಂಟು ಶೀತಲ ಘಟಕಗಳನ್ನು ನಿರ್ಮಿಸಲಾಗುತ್ತಿದೆ.

ರಾಜ್ಯದ ಕಾಫಿಯನ್ನು ಪ್ರಚುರಪಡಿಸಲು ಮತ್ತು ಕಾಫಿ ಎಕೋ ಟೂರಿಸಂ ಅನ್ನು ಉತ್ತೇಜಿಸಲು ಬ್ರಾಂಡಿಂಗ್‌ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್‌ ಉತ್ತೇಜಿಸಲು ಹೊಸ ಕಾರ್ಯಕ್ರಮವನ್ನು ಜಾರಿಗೆ ತರುವ ಉದ್ದೇಶವಿದೆ. ವಾಣಿಜ್ಯ ಹೂವಿನ ರಫ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ ಹೊಂದುವ ಸಾಮರ್ಥ್ಯ ಹೊಂದಿದ್ದು, ಇವುಗಳ ತಳಿಗಳ ಕೊರತೆ ನಿವಾರಿಸಲು ಅಂತಹ ತಳಿಗಳನ್ನು ಆಮದು ಮಾಡಿಕೊಂಡು ರೈತರಿಗೆ ಕೈಗೆಟಕುವ ದರದಲ್ಲಿ ಒದಗಿಸಲು ಕ್ರಮವಹಿಸಲಾಗುತ್ತಿದೆ.

ಸರ್ಕಾರವು ರೈತರಿಗೆ ಶೂನ್ಯ ಬಡ್ಡಿದರದ ಸಾಲ ಸೌಲಭ್ಯಗಳನ್ನು ನೀಡಲು ಬದ್ಧವಾಗಿದೆ. ಆದಾಗ್ಯೂ, ಈ ಸವಲತ್ತುಗಳನ್ನು ಫಲಪ್ರದವಾಗಿ ಜಾರಿಗೆ ತರುವಲ್ಲಿ ಕೆಲವು ಸವಾಲುಗಳು ಎದುರಾಗಿವೆ. ನಬಾರ್ಡ್‌ನಿಂದ ನಿರೀಕ್ಷಿತ ಪ್ರಮಾಣದಲ್ಲಿ ಸಾಲ ಸೌಲಭ್ಯ ಸಿಗದಿರುವುದು, ಸಹಕಾರಿ ಸಂಘಗಳ ಮೂಲಕ ಸಾಲ ವಿತರಣೆಯಲ್ಲಿ ವಿಳಂಬ, ರೈತರ ಸಾಲ ಮರುಪಾವತಿ ಸಾಮರ್ಥ್ಯ ಮತ್ತು ಜಮೀನು ಹಿಡುವಳಿಯ ಆಧಾರದ ಮೇಲೆ ಸಾಲದ ಪ್ರಮಾಣವನ್ನು ನಿಗದಿಪಡಿಸುವುದು ಮುಂತಾದ ಸವಾಲುಗಳು ಎದುರಾಗಿವೆ. ಈ ಸವಾಲುಗಳನ್ನು ಎದುರಿಸಲು ಸರ್ಕಾರವು ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ. ನಬಾರ್ಡ್‌ನಿಂದ ಹೆಚ್ಚಿನ ಸಾಲ ಸೌಲಭ್ಯ ಪಡೆಯಲು ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ಸಹಕಾರಿ ಸಂಘಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments